ಯಕ್ಷಗಾನೊ ಬೊಂಬೆಯಾಟೊ: ಆವೃತ್ತಿಲೆನ ನಡುತ ವ್ಯತ್ಯಾಸೊ

No edit summary
೧ನೇ ಸಾಲ್:
{{under construction}}
{{under construction}}
==ಗೊಂಬೆಯಾಟ==
* ಸಾಮಾನ್ಯವಾದ್ ಹಳ್ಳಿಲು ಇಂಚಿತ್ತಿ ಮನೋರಂಜನೆ ಏರ್ಪಡಿಸುತ್ತಿದ್ದು ಸುಗ್ಗಿಯ ಕಾಲದಲ್ಲಿ ದುಡಿಮೆಯ ನಂತರ ಫಸಲನ್ನು ಮನೆಯಲ್ಲಿ ತುಂಬಿಕೊಂಡ ಮೇಲೆ ಇಂತಹ ಮನರಂಜನೆಗೆ ತೊಡಗುತ್ತಿದ್ದರು. ಕಲಾವಿದರು ಮೊದಲಿಗೆ ಊರಿನ ಮುಖಂಡರನ್ನೇ ಕಂಡು ಗೊಂಬೆಯಾಟಕ್ಕೆ ಅವಕಾಶ ಮಾಡಿಕೊಡುವಂತೆ ಕೇಳಬೇಕಾಗಿತ್ತು. ಅವರಿಂದ ಅನುಮತಿ ಸುಲಭವಾಗಿ ದೊರಕುತ್ತಿತ್ತು. ಈಡೀ ರಾತ್ರಿ ದೀಪಕ್ಕೆ ಬೇಕಾದ ಎಣ್ಣೆಯ ಖರ್ಚನ್ನು ಅವರೇ ಕೊಡುತ್ತಿದ್ದರು.
ತಮ್ಮ ಹನ್ನೆರಡನೆಯ ವಯಸ್ಸಿನಲ್ಲಿಯೇ ತಂದೆಯ ಗೊಂಬೆಯಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. [[ಶೃಂಗೇರಿ]]ಯಲ್ಲಿ ಪ್ರದರ್ಶನ ಮಾಡುವ ಹೊತ್ತಿಗೆ (1941) ಆರ್ಥಿಕ ಮುಗ್ಗಟ್ಟು ಹಾಗೂ ಸಾರ್ವಜನಿಕ ಪ್ರೋತ್ಸಾಹವಿಲ್ಲದೆ ತಮ್ಮ ತಂದೆ ಹತ್ತು ಎಕರೆ ಜಮೀನು ಕಳೆದುಕೊಂಡಿದ್ದನ್ನು ನೋಡಿದ್ದರು. ಆದ್ದರಿಂದ ಈ ಕಲೆಯನ್ನಾಧರಿಸಿದರೆ ಉದರ ನಿರ್ವಹಣೆಗೆ ತೊಂದರೆಯಾಗಬಹುದೆಂದು ಭಾವಿಸಿ [[ನಾಗಪುರ]], [[ಪುಣೆ]], [[ಮುಂಬಯಿ]]ಗಳಲ್ಲಿ ಕೆಲಕಾಲ ನೌಕರಿ ಮಾಡಿದರು. ಹದಿನಾಲ್ಕು ವರ್ಷಗಳ ಅನಂತರ ಕಲೆಯ ತುಡಿತದಿಂದ ಮರಳಿ ಊರಿಗೆ ಬಂದರು (1955). ಬಣ್ಣ ಕಳೆದುಕೊಂಡು, ವೇಷ ಹರಿದುಕೊಂಡು ಮೂಲೆಯಲ್ಲಿ ಬಿದ್ದ ಗೊಂಬೆಗಳನ್ನು ಕೈಗೆತ್ತಿಕೊಂಡು ಅವಕ್ಕೆ ಹೊಸರೂಪ ಕೊಡಲು ಮುಂದಾದರು. ಅಲ್ಲಲ್ಲಿ ಪ್ರದರ್ಶನ ನೀಡಲಾರಂಭಿಸಿದರು. ಆದರೂ ಜೀವನ ಸಾಗಿಸುವುದು ಕಷ್ಟವಾದಾಗ ಕುಂದಾಪುರದ ಒಂದು ಕಟ್ಟಿಗೆ ಕೊರೆಯುವ ಮಿಲ್ಲಿನಲ್ಲಿ ಕೆಲಸಕ್ಕೆ ಸೇರಿಕೊಂಡರು.
* ಅಲ್ಲದೆ ಸಂಭಾವನೆಯ ಜೊತೆಗೆ ಒಂದಿಷ್ಟು ಧವಸ ಧಾನ್ಯವನ್ನು ಊರಿನವರಿಂದ ಸಂಗ್ರಹಿಸಿ ಕೊಡುತ್ತಿದ್ದರು. ಗೊಂಬೆಯಾಟದವರು ಅಲೆಮಾರಿಗಳಾದರು ಕೆಲವರು ಇಂತಿಷ್ಟು ಪ್ರದೇಶವೆಂದು ಹಂಚಿಕೊಂಡು ಅದಕ್ಕೆ ಸೇರಿದ ಹಳ್ಳಿಗಳಲ್ಲಿ ಮಾತ್ರ ಆಟ ಆಡಿಸುತ್ತಿದ್ದರು. ಊರಿನ ಮಧ್ಯಭಾಗದಲ್ಲಿ ವಿಶಾಲವಾದ ಜಾಗವಿರುವಡೆಯಲ್ಲಿ ಆಟದ ಎರ್ಪಾಡು ನಡೆಯುತ್ತದೆ. ಇದೊಂದು ಸಂಚಾರಿ ಕಲೆಯಾದುದರಿಂದ ಸಂಚಾರಕ್ಕೆ ಸುಲಭವಾದ ರಂಗಪರಿಕರಗಳನ್ನು ಹೊಂದಿರುವುದು ಕಂಡು ಬರುತ್ತದೆ.
* ರಂಗಮಂದಿರಕ್ಕೆ ನೆಡುವುದಕ್ಕಾಗಿ ನಾಲ್ಕು ಬಿದಿರುಗಳು, ಮೇಲ್ಬಾಗದಲ್ಲಿ ಕಟ್ಟುವುದಕ್ಕೆ ನಾಲ್ಕು ಬಿದಿರುಗಳು, ಮೇಲ್ಭಾಗ ಮತ್ತು ಗೊಂಬೆಗಳನ್ನು ತೋರಿಸುವ ಭಾಗವನ್ನು ಉಳಿದು ಮಿಕ್ಕ ಮೂರು ಕಡೆಗಳಲ್ಲಿ ಮರೆಮಾಡಲು ಬೇಕಾಗುವ-ಚಾಪೆ, ತಡಿಕೆ, ಗೊಂಬೆಗಳ ಪ್ರದರ್ಶನದ ಭಾಗಕ್ಕೆ ಬೇಕಾಗುವ ಬಿಳಿಯ ಪಂಚೆ ಹಾಗು ಕರಿಯ ಕಂಬಳಿ ಇವಿಷ್ಟಿದ್ದರೆ ತೊಗಲು ಗೊಂಬೆಯಾಟದ ರಂಗಮಂದಿರ ಸಿದ್ದಗೊಳ್ಳುತ್ತದೆ. ಜೊತೆಗೆ ಶುಭದ ಸಂಕೇತವಾಗಿ ಮಾವಿನಸೊಪ್ಪನ್ನು ಕಟ್ಟುವ ಕ್ರಮವೂ ಇದೆ.
* ಕುಳಿತುಕೊಂಡು ಕುಣಿಸುವ ಚಿಕ್ಕದಾದ ಗೊಂಬೆಗಳ ರಂಗಮಂದಿರ ಆರು ಅಡಿ ಎತ್ತರವಿದ್ದು ಎಂಟು ಅಡಿಯಷ್ಟು ಚಚ್ಚೌಕವಾಗಿರುತ್ತದೆ. ರಂಗದ ಮುಂಭಾಗದಲ್ಲಿ ಕೆಳಗಡೆ ಎರಡುವರೆ ಅಡಿಯಷ್ಟು ಕರಿಯ ಕಂಬಳಿಯನ್ನು ಕಟ್ಟುತ್ತಾರೆ . ಮೇಲ್ಭಾಗದಲ್ಲಿ ಇನ್ನುಳಿದ ಜಾಗಕ್ಕೆ ಅಪ್ಪಟ ಬಿಳಿಯ ಬಣ್ಣದ ಪಂಚೆಯನ್ನು ಕಟ್ಟುತ್ತಾರೆ. ಗೊಂಬೆಗಳನ್ನು ಅದರ ಹಿಂಬದಿಯಲ್ಲಿಯೆ ಪ್ರದರ್ಶಿಸುವುದು. ಗೊಂಬೆಗಳನ್ನು ಆಡಿಸುವವರು ಒಳಭಾಗದಲ್ಲಿಯೇ ಕುಳಿತಿದ್ದು ಕರಿ ಕಂಬಳಿಯಿಂದಾಗಿ ಅವರು ಯಾರು ಪ್ರೇಕ್ಷಕರ ಕಣ್ಣಿಗೆ ಬೀಳುವುದಿಲ್ಲ. * ಒಳಗಡೆ ಅದರ ಹಿಂಭಾಗದಲ್ಲಿ ಒಂದು ದೀಪವನ್ನು ತೂಗು ಬಿಟ್ಟರುತ್ತಾರೆ. ಇತ್ತೀಚೆಗೆ ಗ್ಯಾಸ್ ಹಾಗು ಗ್ಯಾಸ್ ಲೈಟಿನ ಬಳಕೆಯೂ ಇದೆ. ಅದರ ಬೆಳಕು ತೊಗಲುಗೊಂಬೆಗಳ ಮೇಲೆ ಬಿದ್ದು ಆ ಗೊಂಬೆಗಳ ಪ್ರತಿಫಲನ ಪಂಚೆಯ ಮೇಲೆ ಅದ್ಭುತವಾಗಿ ಕಾಣಿಸಿ ಕೊಳ್ಳುತ್ತದೆ. ಈ ರೀತಿಯ ರಂಗ ಮಂದಿರ ಚಿಕ್ಕ ಗೊಂಬೆಗಳಿಗೆ ಮಾತ್ರ ಸಾಧ್ಯವಾಗುತ್ತಿತ್ತು.
* ಆಳೆತ್ತರದ ಗೊಂಬೆಗಳ ರಚನೆಯೇ ಬೇರೆ ಇದು ಬಯಲು ಸೀಮೆಯ ಬಯಲಾಟದ ರಂಗಮಂದಿರವನ್ನೇ ಹೆಚ್ಚು ಕಡಿಮೆ ಹೋಲುತ್ತದೆ. ಆಳೆತ್ತರದ ಗೊಂಬೆಗಳನ್ನು ಕುಣಿಸಬೇಕಾದರೆ ಕಲಾವಿದ ನಿಂತುಕೊಳ್ಳಬೇಕಾಗುತ್ತದೆ. ನಿಂತುಕೊಂಡೆ ಸೂತ್ರದ ಗೊಂಬೆಯನ್ನಾಡಿಸುವಂತೆ ಕಡ್ಡಿಯ ಸಹಾಯದಿಂದ ಇದನ್ನು ಆಡಿಸುತ್ತಾನೆ. ಪಾತ್ರವನ್ನು ಕುಣಿಸುವಾಗ ಜೊತೆಯಲ್ಲಿ ತಾನೂ ಕುಣಿಯುತ್ತಾನೆ.
* ಬಯಲಾಟದ ಪಾತ್ರಧಾರಿಗಳಂತೆ ಕಾಲಿಗೆ ಗೆಜ್ಜೆಯನ್ನು ಈತ ಕಟ್ಟಿಕೊಂಡಿರುತ್ತಾನೆ. ಕೆಳಭಾಗದಲ್ಲಿ ಹಲಗೆಗಳನ್ನು ಹಾಸಿಕಟ್ಟಿಯನ್ನು ನಿರ್ಮಿಸುವುದು ವಾಡಿಕೆ. ಇದೆಲ್ಲಾ ಆದ ಬಳಿಕ ಆಡಿಸು ಭಾಗವೊಂದನ್ನು ಬಿಟ್ಟು ಉಳಿದ ಮೂರು ಕಡೆಗಳನ್ನು ಸೋಗೆಯ ಗರಿಯಿಂದಲೋ, ಚಾಪೆ ಅಥವಾ ತಡಿಕೆಯಿಂದಲೋ ಮರೆ ಮಾಡುತ್ತಾರೆ. ಮುಂಭಾಗವನ್ನು ನೀಲಿಯ ಪಂಚೆಯಿಂದ ಮುಚ್ಚುತ್ತಾರೆ. ಉಳಿದೆಲ್ಲಾ ತಂತ್ರವೂ ಕುಳಿತುಕೊಂಡು ಆಡಿಸುವ ಗೊಂಬೆಗಳ ರಂಗ ಮಂದಿರದಂತೆಯೇ ಇರುತ್ತದೆ.
* ವಿಘ್ನೇಶ್ವರನ ಪ್ರಾರ್ಥನೆಯೊಂದಿಗೆ ಆಟ ಪ್ರಾರಂಭವಾಗುತ್ತದೆ. ತೊಗಲು ಗೊಂಬೆಯಾಟವನ್ನು ಆಕರ್ಷಣೀಯವನ್ನಾಗಿ ಮಾಡಿ ಪ್ರೇಕ್ಷಕರನ್ನು ಅಲೌಕಿಕ ಪ್ರಪಂಚಕ್ಕೆ ಕರೆದೊಯ್ಯುವ ಚಮತ್ಕಾರವು ಆಡಿಸುವವನ ಕೈಚಳಕದಲ್ಲಿರುತ್ತದೆ. ಅವನು ಚುರುಕಾಗಿದ್ದಷ್ಟೂ ಕಲೆಗಾರಿಕೆ ಉತ್ತಮವಾಗಿರುತ್ತದೆ. ಆಯಾ ಪಾತ್ರಗಳ ಗುದ್ದುಗಾರಿಕೆಗೆ ಸರಿ ಹೊಂದುವಂತೆ. ಹಾಡನ್ನು ಸಂಭಾಷಣೆಯನ್ನು ಜೊಡಿಸುತ್ತಾ ತನ್ನ ಎರಡೂ ಕೈಗಳಿಂದ ಒಂದೊಂದು ಗೊಂಬೆಯನ್ನು ಹಿಡಿದು ಕುಣಿಸು ರೀತಿ ಅಚ್ಚರಿಯನ್ನು ಉಂಟುಮಾಡುವಂತದ್ದು. * ಯುದ್ದದ ಸಂದರ್ಭ, ಬಾಣವನ್ನು ಬಿಡುವ ಗತ್ತು, ಗಧೆಯನ್ನು ಬೀಸುವ ವೈಖರಿ, ತನ್ನ ಮಾತಿನ ಗತ್ತಿನ ಕ್ರಮಕ್ಕೆ ಸರಿಹೊಂದುವಂತೆ ಕತ್ತು ಕೈಕಾಲುಗಳನ್ನು ಆಡಿಸುವ ರೀತಿ ಇವೆಲ್ಲವೂ ಅಪೂರ್ವವಾದ ದೃಶ್ಯಗಳಂತೆ ತೋರುತ್ತವೆ. ಒಂದು ಪಾತ್ರದ ಪ್ರವೇಶ, ನಿರ್ಗಮನಗಳನ್ನು ಬಹಳ ಚಮತ್ಕಾರಗಳಿಂದ ನಿರ್ವಹಿಸಬೇಕಾಗುತ್ತದೆ.
* ನಾಲ್ಕಾರು ಪಾತ್ರಗಳು ಒಟ್ಟೊಟ್ಟಿಗೆ ಬಂದಾಗ ಅವೆಲ್ಲವುಗಳ ಸಂಭಾಷಣೆ, ಹಾಡನ್ನು ಅದಕ್ಕೆ ತಕ್ಕ ಅಭಿನಯವನ್ನು ಏಕಕಾಲದಲ್ಲಿ ಕಲಾವಿದರು ನಿರ್ವಹಿಸಬೇಕಾಗುತ್ತದೆ. ಇವೆಲ್ಲವೂ ಅಭ್ಯಾಸ ಮತ್ತು ವಿಶಿಷ್ಟ ಕಲಾಶಕ್ತಿಯಿಂದ ನೆರವೇರುತ್ತದೆ. ಮೈಸೂರು ಭಾಗದ ಗೊಂಬೆಯಾಟದಲ್ಲಿ ನಾಲ್ಕಾರು ಜನ ಕಲಾವಿದರು ಒಟ್ಟಿಗೆ ಗೊಂಬೆಯಾಡಿಸುವ ಕ್ರಮವುಂಟು.
 
==ಗೊಂಬೆಯಾಟ ತರಬೇತಿ ಕೇಂದ್ರ==
[[ಕಮಲಾದೇವಿ ಚಟ್ಟೋಪಾಧ್ಯಾಯ]]ರ ಪ್ರೋತ್ಸಾಹದಿಂದ ಹ್ಯಾಂಡಿಕ್ರಾಫ್ಟ್‌ ಬೋರ್ಡಿನಿಂದ ಆರಂಭವಾದ ಟ್ರೈನಿಂಗ್ ಸೆಂಟರ್ ಕಾರಣಾಂತರಗಳಿಂದ ಮುಚ್ಚಿಹೋಗಿದ್ದರೂ (1966) ತಯಾರಾದ ಗೊಂಬೆಗಳು ಸುಸ್ಥಿತಿಯಲ್ಲಿದ್ದವು. ಇಂಥ ಸಂದರ್ಭದಲ್ಲಿ ಮೈಸೂರು ಎಜ್ಯುಕೇಶನಲ್ ಕಲ್ಚರಲ್ ಅಂಡ್ ಸರ್ವಿಸ್ ಕೋ-ಆಫ್ ಸಂಸ್ಥೆಯವರು ಆರ್ಥಿಕ ಸಹಾಯಕ ಮಾಡಿ ಗೊಂಬೆಯಾಟ ತರಬೇತಿ ಕೇಂದ್ರ ನಡೆಸುವಂತೆ ಮಾಡಿದರು. ಕೇಂದ್ರ ಸಂಗೀತ ನಾಟಕ ಅಕಾಡೆಮಿಯೂ ಕೊಂಚ ಆರ್ಥಿಕ ನೆರವು ನೀಡಿತು. ಈ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಅಕಾಡೆಮಿ ನೆರವು ನೀಡಲು ಮುಂದೆ ಬಂದರೂ ಕಾರಣಾಂತರಗಳಿಂದ ಕಾಮತರು ಅದನ್ನು ಸ್ವೀಕರಿಸಲಿಲ್ಲ.